ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಲಿದೆ

ಸಾಗರ:ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕರೆಯಲಾಗಿದ್ದ ಪಕ್ಷದ ಪ್ರಮುಖರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಅರ್ಹ ಅಭ್ಯರ್ಥಿಯಾಗಿದ್ದು ಅವರ ಗೆಲುವಿಗೆ ಪೂರಕ ವಾತಾವರಣ ಇದೆ. ಕಾರ್ಮಿಕ ಕ್ಷೇತ್ರದಿಂದ ಬಂದಿರುವ ಮಂಜುನಾಥ್‌ಗೆ ಅತಿಹೆಚ್ಚು ಪದವೀಧರರ ಬೆಂಬಲ ಇದೆ. ಶಿಕ್ಷಕರ ಕ್ಷೇತ್ರದಿಂದ ಕೊಡಗಿನಿಂದ ಶಿಕ್ಷಕ ವೃತ್ತಿ ನಿರ್ವಹಿಸಿರುವ ಮಂಜುನಾಥ್ ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ.

ವಿಧಾನ ಪರಿಷತ್ ಚುನಾವಣೆ ವಿಭಿನ್ನ ವಾಗಿದ್ದು ಈ ಕ್ಷೇತ್ರಕ್ಕೆ ಮತ ಹಾಕುವವರನ್ನು ಹುಡುಕಿ ಅವರ ಮನವೊಲಿಸಿ, ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಮನವಿ ಮಾಡಿದರು.

Leave a Reply

Your email address will not be published. Required fields are marked *